Showing posts with label ಬದನೆ. Show all posts
Showing posts with label ಬದನೆ. Show all posts

Thursday, February 11, 2010

ಬದನೇಕಾಯಿ !!

ಬಿ ಟಿ ಬದನೆ.. ಬಹುಶ ಎಲ್ಲರೂ ಇದರ ಬಗ್ಗೆ ಕೇಳಿಯೇ ಇದ್ದೀರಿ.. ತುಂಬಾ ದಿನಗಳಿಂದ ಇದರ ಬಗ್ಗೆ ನ್ಯೂಸ್ ಪೇಪರ್ , ಟ್ಟಿ ವಿ ಗಳಲ್ಲಿ ಕೇಳುತ್ತಲೇ ಇದ್ದೇವೆ.. ಬಿ ಟಿ ಬದನೆ ಬೇಕೇ, ಬೇಡವೇ ಅನ್ನೋ ಜಿಜ್ಞಾಸೆ ತುಂಬಾ ದಿನಗಳಿಂದ ನಮ್ಮ ರಾಜಕಾರಣಿಗಳಿಗೆ, ವಿಜ್ಞಾನಿಗಳಿಗೆ ಇದ್ದೆ ಇದೆ.. ಇದು ಬೇಡವೇ ಬೇಡ ಅಂತ ಹೇಳಿರೋದು ಶುದ್ಧ ಭಾರತೀಯರು ಮಾತ್ರ.. ಅವರಿಗೆ ನಮ್ಮ ದೇಶದ ಬಗ್ಗೆ, ನಮ್ಮ ಜನರ ಬಗ್ಗೆ ಕಾಳಜಿಯಿತ್ತು.. ಅರೆ, ಈ ಬದನೆಗೂ ನಮ್ಮ ದೇಶದ ಭವಿಷ್ಯ ಕ್ಕೂ ಏನ್ರೀ ಸಂಬಂಧ ಅಂತ ಕೇಳ್ತೀರಾ?? ಹಾಗಾದ್ರೆ ಮುಂದೆ ಓದಿ..

ಈ ಬಿ ಟಿ  ಗೆ ಆಂಗ್ಲ ಭಾಷೆಯಲ್ಲಿ Bacillus thuringiensis ಅಂತ ಹೇಳ್ತಾರೆ.. ಇದೊಂದು ಥರ ಬ್ಯಾಕ್ಟಿರಿಯಾ ಇದ್ದ ಹಾಗೆ.. ಇದನ್ನು ಬದನೆಯ ಬಿಜಕ್ಕೆ injection ಥರಾ ಚುಚ್ಚಿ ಹೊಸ ತಳಿ ರೂಪಿಸಿದ್ರಲ್ಲಾ ಅದಕ್ಕೆ ಬಿ ಟಿ ಬದನೆ ಅಂದ್ರು.. ಇಂತಹ ತಳಿಗಳಿಗೆ Genetically  Modified ಆಹಾರ ಅನ್ನುತ್ತಾರೆ.. ಇದರ ಲಾಭ ಏನಪ್ಪಾ ಅಂದ್ರೆ ಇದು ನಮ್ಮ ಮಾಮೂಲಿ ತಳಿಗಿಂತ ಹೆಚ್ಚಿನ ಉತ್ಪತ್ತಿ ನೀಡುತ್ತೆ, ಕೊಳೆನಾಷಕ ಔಶಧಿಯ ಅಗತ್ಯವಿಲ್ಲ (ಇದಕ್ಕೆ ಬಳಸಿರೋ ಬ್ಯಾಕ್ಟಿರಿಯಾ ಮತ್ತು ಕೆಮಿಕಾಲ್ ಗಳು ಕೊಳೆ ಬರೋಕೆ ಬಿಡಲ್ಲ ಅಂದಮೇಲೆ ಕೊಳೆನಾಷಕ ಯಾಕ್ರೀ?), ಗಾತ್ರದಲ್ಲಿ ಇಂತಹ ತರಕಾರಿಗಳು ದೊಡ್ದದಾಗಿರುತ್ತವೆ... ಹೆಚ್ಚಿನ ತರಕಾರಿ, ಹೆಚ್ಚಿನ ದುಡ್ಡು, ಯಾವ ರೈತನಿಗೆ ಬೇಡ ಸ್ವಾಮೀ??
ಹಾಗಾದ್ರೆ ನಮಗೂ ಇದು ಇರ್ಲಾ? ಅಮೇರಿಕಾ ದಲ್ಲಿ ಹೆಚ್ಚಿನ ತರಕಾರಿಗಳೆಲ್ಲಾ ಹೀಗೆ Genetically Modified (ಬದನೆ ಬಿಟ್ಟು).. ಹಾಗಾದ್ರೆ ಇದರಿಂದ ಏನು ನಷ್ಟ? ನಮಗ್ಯಾಕೆ ಬೇಡಾ ಅಂತೀರಾ .. ಪಟ್ಟಿ ದೊಡ್ಡದಿದೆ..
೧. ಇಂತಹ ತರಕಾರಿಗಳಿಗೆ ರುಚಿ ಅನ್ನೋದು ಖಂಡಿತಾ ಇಲ್ಲ.
೨. ಇವು ಆರೋಗ್ಯಕ್ಕೆ ಹಾನಿಕಾರಕ ಅಲ್ಲ ಅನ್ನೋದು ಇನ್ನೂ ಸಾಬಿತಾಗಿಲ್ಲ.
೩. ಇಡೀ ವಿಶ್ವದಲ್ಲಿ ಇದನ್ನು ಮಾಡೋ ತಾಕತ್ತಿರೋದು ಒಂದೇ ಒಂದು ಕಂಪನಿ ಗೆ ಅದು "ಮೊನ್ಸಂಟೋ".
೪. ಇದಕ್ಕೆ ಸಹಕರಿಸೋದು ಈ ಮೊನ್ಸಂಟೋ ಕಂಪನಿ ಯ ಅಂಗ ಸಂಸ್ತೆಗಳು.
೫. ಈ ಕಂಪನಿ ಅಮೆರಿಕಾದ್ದು..
೬. ಮೊನ್ಸಂಟೋ ಹೊರತಂದ ಇಂತಹ ಉತ್ಪನ್ನಗಳಿಗೆ "ಚೆನ್ನಾಗಿದೆ", "ಏನೂ ತೊಂದರೆ ಇಲ್ಲ ಅಂತ ಪ್ರಮಾಣ ಪತ್ರ ನೀಡೋದು ಶುದ್ಧ ಇಲ್ಲಿಯ ಕಳ್ಳರೇ (ಪ್ರಮಾಣ ಪತ್ರ ನೀಡಿದ ಕಂಪನಿ ಯ ಹೆಸರು ಬೇರೆ ಇರುತ್ತೆ.. ಕಂಪನಿ ಮಾತ್ರ ಮೊನ್ಸಂಟೋ ದ್ದೆ ಆಗಿರುತ್ತೆ)
ಅರೆ ಅರೆ.. ಪಟ್ಟಿ ಮುಂದೆ ಬೆಳೆಸ್ತಿನಿ , ಈಗ ಬದನೆಗೆ ಬರೋಣ.. ಈ ಬಿ ಟಿ ಬದನೆ ಇನ್ನೂ ಯಾವ ದೇಶದಲ್ಲೂ ಇಲ್ಲ.. ನಮ್ಮ ಭಾರತದಲ್ಲೇ ಮೊದಲು ಇದನ್ನು ಮನುಷ್ಯರಿಗೆ ತಿನ್ನಿಸೋಕೆ ಪ್ರಯತ್ನ ನಡೀತಾ ಇದೆ.. ಮೊನ್ಸಂಟೋ ಕಂಪನಿ ಯ ಇನ್ನೊಂದು ಅಂಗ ಸಂಸ್ತೆಯಾದ ಮಹಿಕೋ (Mahyco ) ಈ ಬಿ ಟಿ ಬದನೆ ಹೊರತಂದಿದೆ.. ಆದರೆ ಇದಕ್ಕೆ ಯಾವುದೇ ದೇಶ ಅನುಮತಿ ನೀಡದ ಕಾರಣ ಇದನ್ನು ಈಗ ಭಾರತೀಯರ ಮೇಲೆ ಪ್ರಯೋಗಿಸಲು ಯತ್ನಿಸಲಾಗುತ್ತಿದೆ.. ಎಷ್ಟಾದರೂ ನಾವು ಅಮೇರಿಕಾದ ಪಾಲಿಗೆ ಪ್ರಯೋಗ ಶಾಲೆಯಲ್ಲಿ ಇಲಿ ಇದ್ದಂತೆ ಅಲ್ಲವೇ..ಈ ಬದನೆ ನಮ್ಮ ಮೇಲೆ ಪ್ರಯೋಗ ಆಗಬೇಕು, ತೊಂದರೆ ಇದ್ದರೆ ಅದನ್ನು ಸರಿಪಡಿಸಬೇಕು.. ಯಾವ ಖಾಯಿಲೆ ಹೇಗೆ ಬರುತ್ತೆ ಅನ್ನೋ ಸಂಶೋಧನೆ ನಮ್ಮ ಮೇಲೆ ನಡೀಬೇಕು.. ಎಲ್ಲಾ ಓ ಕೆ ಆದ ಮೇಲೆ ಇದನ್ನು ಅಮೇರಿಕಾ ಬಳಸಬೇಕು...ಹೇಗಿದೆ ಚಾಣಕ್ಯ ನೀತಿ??
ಈಗಾಗಲೇ ಈ  ಬದನೆಯನ್ನು ಕೆಲವೊಂದು ಪ್ರಾಣಿಗಳ ಮೇಲೆ ಪ್ರಯೋಗ ನಡೆಸಲಾಗಿದೆ..
೧. ಬಿ ಟಿ ಬದನೆ ತಿಂದ ಇಲಿಗಳು diarrhoea ಗೆ ತುತ್ತಾಗಿವೆ.. ಒಮ್ಮೆಲೇ ಹೆಚ್ಚು ನೀರು ಕುಡಿಯಲು ಪ್ರಾರಂಭಿಸಿವೆ.. ಪಿತ್ತಕೋಶದ ಭಾರ ಕಮ್ಮಿಯಾಗಿದೆ..
೨. ಇದನ್ನು ತಿಂದ ಕೋಳಿಗಳು ಕಾಳು ತಿನ್ನೋದು ಕಮ್ಮಿ ಮಾಡಿದವು..
೩. ಇದನ್ನು ತಿಂದ ದನಗಳು ತಮ್ಮ ಮೈ ಭಾರ ಹಿಗ್ಗಿಸಿ ಕೊಂಡವು.. ಹೆಚ್ಚಿನ ಹಾಲು ನೀಡತೊಡಗಿದವು. ಇವೆಲ್ಲ ಇದರ ಸೈಡ್ ಎಫೆಕ್ಟ್ ಆಗಿತ್ತು..
೪. ಈ ಬದನೆಯಲ್ಲಿ ನಮ್ಮ ಮಾಮೂಲಿ ಬದನೆಗಿಂತ ಶೇಕಡಾ ೧೫ ರಷ್ಟು ವಿಟಮಿನ್ ಗಳು ಕಮ್ಮಿ ಇವೆ.. ಒಂಥರಾ toxic ಆಸಿಡ್ ಈ ಬದನೆಗಳಲ್ಲಿ ಕಂಡು ಬಂದಿದೆ..
೫. ಇದನ್ನು ಬೇರೆ ಬೇರೆ ಪ್ರಾಣಿಗಳ ಮೇಲೆ ಪ್ರಯೋಗ ಮಾಡಿದಾಗ ರಕ್ತದ ಕಾಯಿಲೆ ಗಳು ಕಂಡು ಬಂದಿವೆ.. ಅದೇ ರೀತಿ ನಮಗೆ ಗಾಯವಾದಾಗ ರಕ್ತ ಹೆಪ್ಪು ಕಟ್ಟುತ್ತದೆ ಅಲ್ಲವೇ? ಈ ಹೆಪ್ಪುಕಟ್ಟುವಿಕೆ ಅನ್ನೋ ಕ್ರಿಯೆ ಮಾಮೂಲಿಗಿಂತ ಹೆಚ್ಚಿನ ಸಮಯ ತೆಗುದು ಕೊಂಡದ್ದು ಸಂಶೋಧನೆಯಿಂದ ಸಾಬೀತಾಗಿದೆ..
೬. ಇದರಲ್ಲಿರುವ ವಿಟಾಮಿನ್ ಗಳಿಂದಾಗಿ ನಮ್ಮ ದೇಹದ ಮೇಲೆ ಮಾತ್ರೆಗಳು ತಮ್ಮ ರೋಗ ನಿರೋಧಕ ಶಕ್ತಿಯನ್ನು ದೇಹದ ಮೇಲೆ ತೋರಲು ವಿಫಲವಾಗಿವೆ (eg  : antibiotic resistance ).. ಇದು ನಮ್ಮ ಆರೋಗ್ಯದ ಮೇಲೆ ಎಂತಹ ಘೋರ ಪರಿಣಾಮ ಬೀರಬಹುದು ಗೊತ್ತೇ??

ಆದರೂ ನಮಗೆ ಈ ಬದನೆ ಬೇಕೇ? ನಮ್ಮ ದೇಶದಲ್ಲೇ ಸಿಗುವ ೨೫-೩೦ ಜಾತಿಯ ಬದನೆ ನಮಗೆ ಸಾಕಾಗದೆ?( ಇವೆಲ್ಲಾ ನೈಸರ್ಗಿಕ) .. ಈ ಬದನೆ ಮೇಲೆ ನಮ್ಮ ರಾಜಕಾರಣಿಗಳಿಗೆ ಯಾಕಿಷ್ಟು ಆಸೆ.. ?? ಉತ್ತರ ತುಂಬಾ ಸುಲಭ.. ಇಡೀ ಪ್ರಪಂಚದಲ್ಲಿ  , ತಮ್ಮ ಕೆಲಸವಾಗಲು , ದುಡ್ಡು ಮಾಡಲು "ಮೊನ್ಸಂಟೋ" ಕಂಪನಿ ಕೊಡುವಷ್ಟು ಲಂಚ ಯಾರೂ ಕೊಡಲ್ಲ.. ಇವರು ವರ್ಷಕ್ಕೆ ಅತೀ ಹೆಚ್ಚು ದುಡ್ಡು ಖರ್ಚು ಮಾಡುವುದೇ ಲಂಚ ನೀಡಲು ಅಂದ್ರೆ ನಂಬ್ತೀರಾ? (ಹಾಗಂತ ತುಂಬಾ ಜನ ಹೇಳೋದನ್ನ ಅಂತರಜಾಲದಲ್ಲಿ ಓದಿದೆ).. ಇಲ್ಲೂ ಅಷ್ಟೇ ನಮ್ಮ ರಾಜಕಾರಣಿಗಳಿಗೆ ಲಂಚ ಕೊಟ್ಟು ಇದೀಗ ಈ ಕಂಪನಿ ನಮ್ಮ ದೇಶವನ್ನು ಪ್ರಯೋಗ ಶಾಲೆಯನ್ನಾಗಿಸಲು ಹೊರಟಿದೆ.. ಈಗಾಗಲೇ ಬಿ ಟಿ ಹತ್ತಿ ತಂದು ತನ್ನ ವಂಶ ಬೆಳೆಸುತ್ತಿದೆ..
ಹೀಗೆ ಮುಂದುವರಿದರೆ ಏನಾದೀತು??
ನಾವು ಈ ಬಿ ಟಿ ಹತ್ತಿಯನ್ನೇ ನೋಡೋಣ.. ಈಗಾಗಲೇ ನಮ್ಮ ರೈತರು ಈ ಬಿ ಟಿ ಹತ್ತಿಗೆ ಮೊರೆ ಹೋಗಿದ್ದಾರೆ.. ಇದು ಬೀಜ ರಹಿತ ಹತ್ತಿ.. ಹೆಚ್ಚು ಇಳುವರಿ, ಹೆಚ್ಚು ಲಾಭ.. ಆದರೆ ಮೊನ್ಸಂಟೋ ರೈತರಿಗೆ ಈ ಬೀಜ ಕೊಡುವ ಮುನ್ನ ಒಂದು ಒಪ್ಪಂದ ಮಾಡಿಕೊಳ್ಳುತ್ತದೆ.. ಅದು , ಒಮ್ಮೆ ಈ ಬಿ ಟಿ ಬಳಸಿದರೆ ಮುಂದೆ ಕಮ್ಮಿ ಅಂದ್ರೂ ೧೦-೧೫ ವರ್ಷ ಅದನ್ನೇ ಬಳಸಬೇಕು.. ಬೇರೆ ಬೆಳೆ ಬೆಳೆಯುವಂತಿಲ್ಲ, ಮೊನ್ಸಂಟೋ ಕಂಪನಿ ನೀಡುವ ರಾಸಾಯನಿಕಗಳನ್ನೇ ಬಳಸಬೇಕು.. ಹೀಗೆ..
ಒಂದು ವೇಳೆ ಹೀಗೆ ಸಾಗಿದರೆ ಮುಂದೆನಾದಿತು?. ನಾವು ಬಿ ಟಿ ಹತ್ತಿಗೆ ಮೊರೆ ಹೋಗಿ ನಮ್ಮ ದೇಶಿಯ ಹತ್ತಿ ಸರ್ವ ನಾಶವಾಯಿತು ಅನ್ನೋವಾಗ ಯೆದ್ದೆಳುತ್ತಾರೆ ಈ ಕಳ್ಳರು..ಮೊದಲೇ ಇವರದ್ದು ಬೀಜ ರಹಿತ ಹತ್ತಿ.. ಬೆಳೆದ ಹತ್ತಿಯಿಂದ ಮುಂದಿನ ವರ್ಷದ ಬೆಳೆ ಬೆಳೆಯೋಕೆ ಸಾಧ್ಯನೇ ಇಲ್ಲ (ಬೀಜಾನೆ ಇಲ್ವಲ್ಲ ಸ್ವಾಮೀ..) .. ಆಗ ನಾವು ಮತ್ತೆ ಮೊನ್ಸಂಟೋ ಹತ್ತಿರ ಹೋಗಿ ಭಿಕ್ಷೆ ಬೇಡಬೇಕು.. ಬೀಜ ಕೊಡಿ ಅಂತ.. ಇಷ್ಟರವರೆಗೆ ೧ ರೂಪಾಯಿಗೆ ಸಿಗುತ್ತಿದ್ದ ಬೀಜಕ್ಕೆ ಈಗ ೧೦ ರೂಪಾಯಿ ಅನ್ನುತ್ತಾರೆ.. ನಾವು ತಗೋಳ್ಳಲೇ   ಬೇಕು.. ೧೦ ರೂಪಾಯಿ ಇದ್ದ ಹತ್ತಿಗೆ ೧೦೦ ರೂಪಾಯಿಯಾಗುತ್ತದೆ.. ಇದು ಹೀಗೆ ಮುಂದುವರಿದು ನಮ್ಮ ಕೃಷಿ ಎಲ್ಲಾ ಮೊನ್ಸಂಟೋ ಕೈಯಲ್ಲಿ..!!! ಇದು ಕೃಷಿಯಲ್ಲಿನ ಎಲ್ಲಾ ವಸ್ತುಗಳಿಗೆ ಅನ್ವಯಿಸೋಕೆ ಎಷ್ಟು ಕಾಲ ಬೇಕಾದೀತು.. ನಿಧಾನಕ್ಕೆ ಅದು ಎಲ್ಲವನ್ನೂ ನುಂಗಿ ನೀರು ಕುಡಿಯುತ್ತದೆ ..
ಅದೇನೋ ಸದ್ಯಕ್ಕೆ ಮಂತ್ರಿ ಮಹಾವರ್ಯ ಇದಕ್ಕೆ ಲಗಾಮು ಹಾಕಿದ್ದಾನೆ.. ಇದೆಲ್ಲ ನಮ್ಮ ನಿಮ್ಮೆಲ್ಲರ ಕಣ್ಣಿಗೆ ಬಟ್ಟೆ ಕಟ್ಟುವ ಕೆಲಸ.. ಇನ್ನು ಕೆಲವೇ ದಿನಗಳಲ್ಲಿ ಇಂಥಾ ಬೇರೆ ಬೇರೆ ತರಕಾರಿಗಳು, ಬದನೆ ಎಲ್ಲವೂ ಲಗ್ಗೆ ಹಾಕಲಿವೆ!!!
 "ಝಣ ಝಣ ಝಣ ಝಣ ಕಾಂಚಣ ದಲ್ಲಿ
 ಅಮೇರಿಕಾದ ಲಾಂಛನದಲ್ಲಿ ,
 ಎಲ್ಲಾ ಮಾಯ ನಾಳೆ ನಾವು ಮಾಯ
 ಎಲ್ಲಾ ಮಾಯ ನಾಳೆ ನೀವು ಮಾಯ" 

ಆದ್ದರಿಂದ.. ಏಳಿ ಭಾರತೀಯರೇ ಎದ್ದೇಳಿ..!!!!